ಭಾನುವಾರ, ಅಕ್ಟೋಬರ್ 16, 2011

ಪ್ರಜಾವಾಣಿ ದೀಪಾವಳಿ ವಿಶೇಷಾಂಕ ಕವನ ಸ್ಪಧರ್ೆ -2011



ಸಹೃದಯ ಕವಿ ಬಸವರಾಜ ಹೃತ್ಸಾಕ್ಷಿ ಸಿರವಾರ ಅವರ
'ಒಬ್ಬ ಅವ್ವ ಇರಲಿ, ಈ ಬಿಸಿಲ ಕೂಸುಗಳಿಗೆ' ಕವನ ಈ ಬಾರಿಯ ಪ್ರತಿಷ್ಠಿತ ಪ್ರಜಾವಾಣಿ ದೀಪಾವಳಿ ವಿಶೇಷಾಂಕ ಕವನ ಸ್ಪಧರ್ೆಯಲ್ಲಿ (2011) ಪ್ರಥಮ ಬಹುಮಾನ ಪಡೆದಿದೆ. ರಾಯಚೂರು ಜಿಲ್ಲೆಯ ಮಾನವಿ ತಾಲ್ಲೂಕಿನ ಸಿರವಾರದಲ್ಲಿ ಬಸವರಾಜ ಹೃತ್ಸಾಕ್ಷಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇನ್ನೂ ಎರಡನೇ ಬಹುಮಾನ ಆರೀಫ್ ರಾಜಾ ಅವರ " ಬುಖರ್ಾ ಹೌಸಿನ ಮುಂದೆ' ಕವನಕ್ಕೆ ದೊರೆತಿದೆ. ಈ ಬಾರಿ ಪ್ರಥಮ ಮತ್ತು ದ್ವಿತೀಯ ಬಹುಮಾನ ರಾಯಚೂರು ಜಿಲ್ಲೆಗೆ ದಕ್ಕಿರುವುದು ವಿಶೇಷ. ಈ ಹಿಂದೆಯೇ ಆರೀಫ್ ರಾಜಾ ಅವರ ಕವನ "ಜಂಗಮ ಪಕೀರನ ಜೋಳಿಗೆ'ಗೆ ಪ್ರಥಮ ಸ್ಥಾನ ದೊರೆತಿದ್ದನ್ನು ನಾವು ಸ್ಮರಿಸಬಹುದು.
ಕಾವ್ಯ ಕ್ಷೇತ್ರದಲ್ಲಿ ಹೊಸ ಪ್ರಯೋಗದೊಂದಿಗೆ ಜಿಲ್ಲೆಯ ಕೀತರ್ಿಯನ್ನು ಹೆಚ್ಚಿಸಿರುವ ಬಸವರಾಜ ಹೃತ್ಸಾಕ್ಷಿ ಸಿರವಾರ ಹಾಗೂ ಆರೀಫ್ ರಾಜಾ ಅವರಿಗೆ
ಹೃದಯಪೂರ್ವಕ ಅಭಿನಂದನೆಗಳು.
- ಪಿ.ಲಂಕೇಶ್ ಬಳಗ, ಸಿಂಧನೂರು (9880757380)